ಸ್ನೇಹ ಭಾಂದವ್ಯ (ಭಾಗ 11): ನಾಗರತ್ನಾ ಗೋವಿಂದನ್ನವರ

            ಇಲ್ಲಿಯವರೆಗೆ ಪತ್ರ ಓದಿದ ಸುಧಾಳಿಗೆ ತುಂಬಾ ಸಂತೋಷವಾಯಿತು. ಅವಳು ಕಲಾಕೃತಿಯನ್ನು ಕೈಗೆ ತಗೊಂಡು ನೋಡಿದಳು. ಆಗ ಚಂದ್ರು ಏನಕ್ಕಾ ನೀನು ಎಷ್ಟೊಂದು ಒಳ್ಳೆ ಉಡುಗೊರೆಗಳು ಬಂದಿವೆ ಅದು ಬಿಟ್ಟು ನೀನು ಕಡಿಮೆ ಬೆಲೆಯ ಆ ಕಲಾಕೃತಿಯನ್ನು ಹಿಡಿದಿದೆಯಲ್ಲ ಎಂದ. ಚಂದ್ರು ಹಾಗೆಲ್ಲ ಅನಬಾರದು. ಉಡುಗೊರೆಗಳಿಗೆಲ್ಲಾ ಹಾಗೆಲ್ಲ ಬೆಲೆ ಕಟ್ಟಬಾರದು. ಇಷ್ಟೆಲ್ಲಾ ಉಡುಗೊರೆಗಳಲ್ಲಿ ಈ ಉಡುಗೊರೆ ತುಂಬಾ ಅಮೂಲ್ಯವಾದದ್ದು ಗೊತ್ತಾ ಇದರಲ್ಲಿ ತಾಯಿ ಮಗುವಿನ ಬಂಧ ಎಂತದು ಅನ್ನೊದು ಗೊತ್ತಾಗತ್ತೆ. … Read more

ಸ್ನೇಹ ಭಾಂದವ್ಯ (ಭಾಗ 10): ನಾಗರತ್ನಾ ಗೋವಿಂದನ್ನವರ

ರೇಖಾ ಇನ್ನು ಎರಡು ದಿನಕ್ಕೆ ತಿರುಗಿ ಶಿವಮೊಗ್ಗಕ್ಕೆ ಹೋಗಬೇಕಾಗಿತ್ತು. ಆದ್ದರಿಂದ ಸುಧಾಳನ್ನು ಇನ್ನೊಂದು ಸಲ ನೋಡಬೇಕು ಎಂದುಕೊಂಡಳು. ಸಾಯಂಕಾಲ ರಾಜೇಶ ಸುಧಾಳನ್ನು ಮನೆಗೆ ಕರೆತಂದ. ಆಗ ಕಾವೇರಮ್ಮ ಬರ್ರಿ ಅಳಿಯಂದ್ರೆ ಎಂದಳು. ಸುಧಾ ಒಳಗೆ ಹೋದಳು. ರಾಜೇಶ ಅತ್ತೆ ನಾನು ಹೋಗ್ತಿನಿ ಅಂದ. ಕಾಫಿ ಕುಡಿದು ಹೋಗುವಿರಂತೆ ಎಂದಳು. ಬೇಡಾ ಅತ್ತೆ ಮನೆಯಲ್ಲಿ ಅಮ್ಮ ಕಾಯ್ತಿರ್‍ತಾಳೆ ಹೋಗ್ತಿನಿ ಎಂದು ಹೋಗಿಯೆಬಿಟ್ಟ. ಮರುದಿನ ರೇಖಾ ಸುಧಾಳ ಮನೆಗೆ ಹೋಗಬೇಕೆಂದು ಕೊಂಡವಳು ಅವಳತ್ತೆಗೆ ನನ್ನ ಕಂಡರೆನೆ ಆಗಲ್ಲಾ ಏನು ಮಾಡೋದು … Read more

ಸ್ನೇಹ ಭಾಂದವ್ಯ (ಭಾಗ 9): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ) ಸುಧಾ ಎಚ್ಚರವಾಗಿದುದ್ದನ್ನು ನೋಡಿದ ರಾಜೇಶ ಅವಳ ಹತ್ತಿರ ಒಂದು ಮಂಚದ ಬದಿಗೆ ಕುರ್ಚಿಯಲ್ಲಿ ಕುಳಿತಿದ್ದ ಕಾವೇರಮ್ಮ ಅವನಿಗೆ ಜಾಗ ಬಿಟ್ಟು ಎದ್ದಳು. ಆಗ ರಾಜೇಶ ಆ ಕುರ್ಚಿಯಲ್ಲಿ ಕೂಡುತ್ತ ಸುಧಾ ಎಂದು ಅವಳ ಕೈಯನ್ನು ಹಿಡಿದ ಆಗ ಸುಧಾಳ ಕಣ್ಣಲ್ಲಿ ನೀರು ಹರಿಯಲಾರಂಭಿಸಿತು. ದಯವಿಟ್ಟು ನನ್ನ ಕ್ಷಮಿಸು ಸುಧಾ. ನಾನು ನನ್ನ ಕೆಲಸದ ಒತ್ತಡದಲ್ಲಿ ನಿನ್ನನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ ಎನ್ನುತ್ತಾ ಅವಳ ಕಣ್ಣೀರು ಒರೆಸಿದ. ಇನ್ನು ಮೇಲೆ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ನನ್ನನ್ನು ನಂಬು ಎಂದ. … Read more

ಸ್ನೇಹ ಭಾಂದವ್ಯ (ಭಾಗ 8): ನಾಗರತ್ನಾ ಗೋವಿಂದನ್ನವರ

ಇಲ್ಲಿಯವರೆಗೆ ನಿನ್ನ ಹಾಗೆ ಅವಳು ಒಂದು ಮಗುವಿನ ತಾಯಿಯಾಗುವವಳು. ಅಲ್ವೆನಮ್ಮ ಅವಳಿಗೂ ತನ್ನ ಮಗುವಿನ ಬಗ್ಗೆ ನೂರಾರು ಆಸೆ ಕನಸುಗಳು ಇರುತ್ತದೆಯಲ್ಲಮ್ಮ, ಆದರೆ ನೀನು ಅವಳಿಗೆ ತಾಯಿಯಾಗಲಿಲ್ಲ. ಅವಳ ಭಾವನೆಗಳನ್ನು ಅರ್ಥಮಾಡಿಕೊಳ್ಳಲಿಲ್ಲ ಎಂದು ದುಃಖಿಸುತ್ತಾ ಹೊರಗೋಡಿ ಬಂದ, ರಮಾನಂದರು ವಾಕಿಂಗ್ ಮುಗಿಸಿ ಬರುತ್ತಿದ್ದವರು ಮಗನನ್ನು ನೋಡಿ ಏನಾಯಿತು ಯಾಕೋ ಹೀಗಿದ್ದೀಯಾ ಎಂದು ಕೇಳಿದರು. ರಾಜೇಶ ನಡೆದುದೆಲ್ಲವನ್ನು ವಿವರಿಸಿದ. ಅವನಿಗೆ ಹೆಂಡತಿಯ ಮೇಲೆ ವಿಪರೀತ ಕೋಪ ಬಂದಿತು. ನೀನು ಆಸ್ಪತ್ರೆಗೆ ನಡಿ ರಾಜೇಶ ತಡಮಾಡಬೇಡ. ನಾನು ಆಮೇಲೆ ಬರುತ್ತೇನೆ … Read more

ಸ್ನೇಹ ಭಾಂದವ್ಯ (ಭಾಗ 7): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ) ರೇಖಾ ಶಿವಮೊಗ್ಗಕ್ಕೆ ಹೋದಳು. ಅವಳಿಗೆ ಮಾತ್ರ ತಾನು ಸ್ವಚ್ಛಂದವಾಗಿ ಆಕಾಶದಲ್ಲಿ ಹಾರಾಡುವ ಹಕ್ಕಿ ತಾನಾಗಬೇಕು ಎಂದೆನಿಸಿತು. ಸುಧಾಳ ಬಗ್ಗೆ ಅವಳಿಗೆ ಅತೀವ ದುಃಖವಾಯಿತು. ತನ್ನ ಗೆಳತಿಯ ಜೀವನ ಹೀಗೇಕಾಯಿತು ಅಂದು ಚಿಂತಿಸುತ್ತಿದ್ದಳು.       ಈ ಸಲ ದೀಪಾವಳಿ ಹಬ್ಬಕ್ಕೆ ಅಳಿಯ-ಮಗಳನ್ನು ಮನೆಗೆ ಕರೆದುಕೊಂಡು ಬರಬೇಕು ಎಂದು ವೆಂಕಟಗಿರಿಗೆ ಕಾವೇರಮ್ಮ ಹೇಳಿದರು. ಅದರಂತೆ ಹೌದು ಕಣೆ ಮರೆತುಬಿಟ್ಟಿದ್ದೆ. ಇವತ್ತೆ ಹೋಗಿ ಹೇಳಿ ಬರುತ್ತೇನೆ ಎಂದು ವೆಂಕಟಗಿರಿ ಸುಧಾಳ ಮನೆಗೆ ಹೋದರು. ಬಾಗಿಲಲ್ಲಿ ಕುಳಿತಿದ್ದ ರಮಾನಂದರು ವೆಂಕಟಗಿರಿಯನ್ನು … Read more

ಸ್ನೇಹ ಭಾಂದವ್ಯ (ಭಾಗ 6): ನಾಗರತ್ನಾ ಗೋವಿಂದನ್ನವರ

ಇಲ್ಲಿಯವರೆಗೆ ಇತ್ತ ರೇಖಾಳ ಮನೆಯಲ್ಲಿ ರಾಧಮ್ಮ ನೋಡ್ರಿ ನಾವು ನಮ್ಮ ರೇಖಾಳಿಗೆ ಮದುವೆ ಮಾಡಬೇಕೂರಿ ಎಂದು ಗಂಡನಿಗೆ ಹೇಳಿದಳು. ಅದಕ್ಕೆ ಶಿವಾನಂದ ಮಾಡೋಣ ಬಿಡು ಈಗ ಅವಳಿಗೇನು ವಯಸ್ಸಾಗಿರೋದು ಎಂದು ಮಾತು ತೇಲಿಸಿದನು. ರೇಖಾಳಿಗೆ ವಾರ್ಷಿಕ ಪರೀಕ್ಷೆಯು ಹತ್ತಿರ ಬಂದಿದ್ದರಿಂದ ಓದುವುದು ಹೆಚ್ಚಾಗಿ ಊರಿಗೆ ಬರಲು ಸಾಧ್ಯವಾಗಲಿಲ್ಲ. ಅವಳು ಸುಧಾಳಿಗೆ ಪರೀಕ್ಷೆಗೆ ಹಾಜರಾಗಲು ಪತ್ರ ಬರೆದಳು. ಅದನ್ನೊದಿದ ಸುಧಾಳಿಗೆ ಗೆಳತಿಗೆ ತನ್ನ ಬಗ್ಗೆ ಇರುವ ಕಾಳಜಿಯನ್ನು ಕಂಡು ರೇಖಾಳ ಬಗ್ಗೆ ಅಭಿಮಾನ ಮೂಡಿತು. ಒಂದು ದಿನ ಅವಳು … Read more

ಕೆಂಗುಲಾಬಿ (ಕೊನೆಯ ಭಾಗ): ಹನುಮಂತ ಹಾಲಿಗೇರಿ

ರಾಜಿಯ ದಾಂಪತ್ಯದ ಬದುಕಿನ ಬಗ್ಗೆ ಶಾರದೆಯ ಮೂಲಕ ದೀಪಾಳಿಗೂ, ದೀಪಾಳ ಮೂಲಕ ನನಗೂ ಗೊತ್ತಾಗುತ್ತಿತ್ತು. ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಶಾರೀಯ ಮೈಯ್ಯ ಮತ್ತು ಮುಖದ ಮೇಲಿನ ಕಳೆ ಮಾಯವಾಗುತ್ತಿರುವುದು ಶಾರದೆಯ ಗಮನಕ್ಕೂ ಬಂದಿತಂತೆ. ರಾಜಿಯ ದಾಂಪತ್ಯದೊಳಗೆ ಹೊಗೆಯಾಡಲಿಕ್ಕೆ ಶುರುವಾಗಿದೆ ಎಂಬುದನ್ನು ಅವಳು ಅರಿತುಕೊಂಡಿದ್ದಳು. ಅಳಿಯ ಕೆಲಸಕ್ಕೆ ಹೋಗೋದನ್ನು ಬಿಟ್ಟು ಪೂರ್ತಿಯಾಗಿ ಕುಡಿತಕ್ಕೆ ಅಂಟಿಕೊಂಡಿದ್ದ. ಕೆಲಸಕ್ಕೆ ಹೋಗು ಅಂತ ರಾಜಿ ಗಂಡನನ್ನು ಒತ್ತಾಯಿಸಿದಾಗ ಆತ ತನ್ನೊಳಗೆ ಅಡಗಿದ್ದ ಲಾವಾರಸಾನ ಹೊರ ಉಕ್ಕಿಸಿದ್ದ. ‘ನಿಮ್ಮಮ್ಮನ್ನ ತಂದ್ಹಾಕು ಅಂತ ಹೇಳು. ಒಬ್ಬ … Read more

ಸ್ನೇಹ ಭಾಂದವ್ಯ (ಭಾಗ 5): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ) ಇತ್ತ ಸಂಜೆ ಆಫೀಸಿನಿಂದ ಮನೆಗೆ ಎಂದ ರಾಜೇಶ ತುಂಬಾ ಖುಷಿಯಾಗಿರುವದನ್ನು ಗಮನಿಸಿದ ಪದ್ಮಮ್ಮ ಏನೋ ರಾಜೇಶ ಇವತ್ತು ತುಂಬಾ ಖುಷಿಯಾಗಿದೆಯಲ್ಲೋ ಏನಾದರೂ ಲಾಟರಿ ಹೊಡೆಯಿತೇನೋ ಎಂದಳು. ಆಗ ರಾಜೇಶನಿಗೆ ಬೇಸರವಾಗಿ ಹೋಗಮ್ಮ ನಿನಗ್ಯಾವಾಗಲು ದುಡ್ಡಿನದೇ ಚಿಂತೆ ಎನ್ನುತ್ತಾ ತನ್ನ ರೂಮಿಗೆ ಹೋದ. ಅವನಿಗೆ ಬೇಗ ನಿದ್ದೆ ಬರದೆ ತನ್ನ ಕಾಲೇಜಿನ ದಿನಗಳು ನೆನಪಾದವು. ತನ್ನ ಸಹಪಾಠಿಯಾದ ಸುನಿತಾಳನ್ನು ತುಂಬಾ ಪ್ರೀತಿಸುತ್ತಿದ್ದ. ದಿನಾ ಅವಳನ್ನು ನೋಡುತ್ತಾ ತನ್ನ ಮನದಲ್ಲಿರೋದನ್ನ ಅವಳಿಗೆ ಹೇಳಬೇಕು ಅಂತ ಎಷ್ಟೊಂದು ಬಾರಿ ಪ್ರಯತ್ನಿಸಿದರೂ … Read more

ಕೆಂಗುಲಾಬಿ (ಭಾಗ 18): ಹನುಮಂತ ಹಾಲಿಗೇರಿ

(ಇಲ್ಲಿಯವರೆಗೆ) ಆಕೆಯ ಬದುಕಿನಲ್ಲಿ ಎದುರಾಗುತ್ತಿರುವ ತಿರುವು ಮುರುವುಗಳನ್ನು ನನ್ನನ್ನು ಕೂಡ ಆತಂಕಗೊಳಿಸಿದ್ದವು. ನಮ್ಮ ಆಫೀಸ್‍ನಲ್ಲಿ ಹಿರಿಯ ಲೈಂಗಿಕ ಕಾರ್ಮಿಕರನ್ನು ಕಾಂಡೋಮ್ ಹಂಚುವ 'ಸಂರಕ್ಷಾ ಸಖಿ'ಯರನ್ನಾಗಿ ನೇಮಕ ಮಾಡಿಕೊಳ್ಳುವ ಬಗ್ಗೆ ಚರ್ಚೆ ಮಾಡಿದ್ದು ನೆನಪಾಗಿ ನಾನು ಆಕೆಗೆ ವಿಷಯವನ್ನೆಲ್ಲ ತಿಳಿಸಿದೆ. ನಮ್ಮ ಕಚೇರಿಯ ವಿಳಾಸ ಕೊಟ್ಟು ಹೊರ ಬಂದೆ. ಮನೆಯ ಬಾಗಿಲಿನಲ್ಲಿ ಕುಳಿತಿದ್ದ ರಾಜಿಯ ಅರಳುತ್ತಿರುವ ಚೆಲುವನ್ನು ನೋಡಿ ನನಗೆ ಸಂತೋಷ, ಗಾಬರಿಗಳೆರಡು ಒಟ್ಟೊಟ್ಟಿಗೆ ಆದವು. ಮತ್ತೆ ಮನೆಯೊಳಗೆ ಹೋಗಿ ರಾಜಿ ಬಗ್ಗೆ ವಿಶೇಷ ಎಚ್ಚರಿಕೆವಹಿಸಬೇಕು ಎಂದು ಕಿವಿಮಾತು … Read more

ಸ್ನೇಹ ಭಾಂದವ್ಯ (ಭಾಗ 4): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ) ಆ ದಿನ ರಾತ್ರಿ ಸುಧಾಳಿಗೆ ನಿದ್ದೆ ಹತ್ತಿರ ಸುಳಿಯದಾಯಿತು ಈ ವಿಷಯವನ್ನು ಹೇಗಾದರೂ ಮಾಡಿ ರೇಖಾಳಿಗೆ ತಿಳಿಸಬೇಕು. ಊರಿಗೆ ಬಂದು ಐದಾರು ದಿನಗಳು ಕಳೆದಿವೆ ಆದರೂ ರೇಖಾಳನ್ನು ಭೇಟಿಯಾಗಿಲ್ಲ. ಈ ಬಿಕ್ಕಟ್ಟಿನಿಂದ ಹೇಗಾದರೂ ಪಾರಾಗಬೇಕೆಂದು ಚಿಂತಿಸುತ್ತ ಮಲಗಿದವಳಿಗೆ ಬೆಳಕು ಹರಿದಿದ್ದೆ ತಿಳಿಯಲಿಲ್ಲ. ಏಳೇ ಸುಧಾ ಇನ್ನು ಮಲಗೆ ಇದ್ದೀಯಲ್ಲೆ. ಗಂಡಿನ ಕಡೆಯವರು ಬರುವುದರೊಳಗಾಗಿ ಮನೆಯ ಕೆಲಸವೆಲ್ಲ ಮುಗಿಯಬೇಕು ಎಂದು ಕಾವೇರಮ್ಮ ಎಬ್ಬಿಸಿದಾಗಲೇ ಸುಧಾಳಿಗೆ ಎಚ್ಚರ. ಸುಧಾ ಎದ್ದು ಬೇಗ ಬೇಗನೆ ಮನೆಗೆಲಸದಲ್ಲಿ ತಾಯಿಗೆ ಸಹಾಯ ಮಾಡಿ … Read more

ಸ್ನೇಹ ಭಾಂದವ್ಯ (ಭಾಗ 3): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ…)  ಇತ್ತ ಗೆಳತಿಯರಿಬ್ಬರು ಮುಂದೇನು ಎಂದು ಚಿಂತಿಸತೊಡಗಿದರು. ಆಗ ರೇಖಾನೆ ಮೊದಲಿಗಳಾಗಿ ಸುಧಾ ನಾಳೆ ಬೆಳಿಗ್ಗೆ ನಾವಿಬ್ಬರು ಮೊದಲು ಎಲ್ಲಾದರೂ ರೂಮು ಬಾಡಿಗೆಗೆ ಸಿಗುತ್ತದಾ ಅಂತ ನೋಡೋಣಾ ಎಂದಳು. ಗೆಳತಿಯ ಮಾತಿಗೆ ಸುಧಾ ಸಮ್ಮತಿಸಿದಳು. ಅನಂತರ ಪಕ್ಕದ ರೂಮಿನ ಹುಡುಗಿಯೊಬ್ಬಳು ಬಂದು ಊಟಕ್ಕೆ ಬರ್ರಿ ಎಂದು ಹೇಳಿ ಹೋದಳು. ಅದರಂತೆ ರೇಖಾ ಮತ್ತು ಸುಧಾ ಇಬ್ಬರು ಊಟದ ಹಾಲಿಗೆ ಬಂದಾಗ ಕನಿಷ್ಟ ನಲವತ್ತು ಹುಡುಗಿಯರು ಊಟಕ್ಕೆ ಕುಳಿತ್ತಿದ್ದರು. ಇವರು ಹೋಗಿ ಕುಳಿತರು. ಆಗ ಹುಡುಗಿಯರೆಲ್ಲ ಒಬ್ಬೊಬ್ಬರಂತೆ ಇವರ … Read more

ಕೆಂಗುಲಾಬಿ (ಭಾಗ 17): ಹನುಮಂತ ಹಾಲಿಗೇರಿ

(ಇಲ್ಲಿಯವರೆಗೆ) ಇಲ್ಲಿಗೆ ಬಂದ ಮೇಲೆ ಇಲ್ಲಿನ ಕೆಲಸ ಎಲ್ಲರಿಗೂ ಸಿಗುವ ಪರಿಧಿಯಲ್ಲ ಅಂತ ಗೊತ್ತಾಯಿತು. ಈ ಕ್ಷೇತ್ರದಲ್ಲಿ ಹತ್ತಾರು ವರ್ಷ ದಕ್ಷತೆಯಿಂದ ದುಡಿಮೆ ಹೆಸರು, ಅನುಭವ ಗಳಿಸಿದರಷ್ಟೇ ಇಂಥ ಕಾಂಟ್ರಾಕ್ಟ್ ಗಳನ್ನು ನಿಭಾಯಿಸಲು ಸಾಧ್ಯ. ಇಲ್ಲಿ ನಂಬಿಕೆ, ವಿಶ್ವಾಸ ಎಲ್ಲಕ್ಕಿಂತ ಮುಖ್ಯವಾಗಿ ಸೌಂದರ್ಯ ಮತ್ತು ನಾಜೂಕತೆ ಮುಖ್ಯವಾಗುತ್ತದೆ. ತುಂಬಾ ಜವಾಬ್ದಾರಿಯ ಕೆಲಸ ಇದು. ಆಕಸ್ಮಾತ್ತಾಗಿ ಸ್ವಲ್ಪ ಲೀಕಾದ್ರೂ ನಮ್ಮನ್ನು ಇಟ್ಟುಕೊಂಡ ಘರ್‍ವಾಲಿಗಳ ಪ್ರಾಣಕ್ಕೆ ಕುತ್ತು ಬರುವುದರಲ್ಲಿ ತಪ್ಪುವುದಿಲ್ಲ. ಹೀಗಾಗಿ ಅವರು ತಮ್ಮ ಕಾರ್ಯವನ್ನು ಅತೀವ ಎಚ್ಚರದಿಂದ ನಿರ್ವಹಿಸುತ್ತಾರೆ.   … Read more

ಸ್ನೇಹ ಭಾಂದವ್ಯ (ಭಾಗ 2): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ…) ಮರುದಿನ ಎಂದಿನಂತೆಯೆ ಗೆಳತಿಯರಿಬ್ಬರು ಅಂದುಕೊಂಡಂತೆಯೇ ಅದೇ ಮಾವಿನ ಮರದ ಕೆಳಗೆ ಭೇಟಿಯಾದರು. ಆಗ ರೇಖಾಳೆ ಮಾತಿಗಾರಂಭಿಸಿದಳು. ಏ ಸುಧಾ ಈಗಾಗಲೇ ಕಾಲೇಜ್ ಅಡ್ಮೀಷನ್ ಶುರು ಆಗಿ ನಾಲ್ಕೈದು ದಿನಗಳಾಗಿವೆ. ಇನ್ನು ಹತ್ತು ದಿನದೊಳಗಾಗಿ ನಾವು ಪಟ್ಟಣಕ್ಕೆ ಹೋಗಿ ಅಡ್ಮೀಷನ್ ಮಾಡಿಸಿ ಬರಬೇಕು. ಇಲ್ಲದಿದ್ದರೆ ದಂಡ ಕಟ್ಟಬೇಕಾಗುತ್ತದೆ. ಹೌದು ಕಣೆ ರೇಖಾ ಆದಷ್ಟು ಬೇಗ ಈ ಕೆಲಸ ಮಾಡಬೇಕು. ಇಲ್ಲದಿದ್ದರೆ ನಾವು ಕಾಲೇಜನ್ನ ಮರೆತು ಮನೆಯಲ್ಲಿದ್ದ ಬಿಡಬೇಕಾಗುತ್ತದೆ ಎಂದಳು. ಈಗೇನು ಮಾಡೋದು ಅಂತ ಮೊದಲು ಹೇಳು ಸುಧಾ … Read more

ಕೆಂಗುಲಾಬಿ (ಭಾಗ 16): ಹನುಮಂತ ಹಾಲಿಗೇರಿ

    (ಇಲ್ಲಿಯವರೆಗೆ) ಜನನಿಬಿಡ ಮಾರುಕಟ್ಟೆಯಲ್ಲಿ ರಸ್ತೆಯ ಎರಡು ಬದಿಗೆ ಶಾರದೆಗಾಗಿ ಕಣ್ಣು ಹಾಯಿಸುತ್ತಾ ನಡೆದಿದ್ದಾಗ ದೀಪಾಳ ಹಿಂದಿನಿಂದ ದೊಡ್ಡ ಹೊಟ್ಟೆಯ ಮುದಿ ಹೆಂಗಸೊಂದು ಧಾವಿಸಿ ಮುಂದೆ ಬಂದಿತು. ನಾವಿಬ್ಬರು ಒಂದು ಕ್ಷಣ ದಂಗುಗೀಡಾದೆವು. ಸ್ವಲ್ಪ ಹೊತ್ತಿನಲ್ಲಿ ದೀಪಾ ಸಾವರಿಸಿಕೊಂಡು ಆ ಮುದಿ ಮಹಿಳೆಯನ್ನು ಸಮಾಧಾನಿಸಿಕೊಂಡು ಬಾಗಿಲು ಮುಚ್ಚಿದ ಅಂಗಡಿ ಮುಂಗಟ್ಟೆಯ ಹತ್ತಿರಕ್ಕೆ ಕರೆದುಕೊಂಡು ಬಂದಳು. ಮುಂಗಟ್ಟೆ ಮೇಲೆ ಕುಳಿತು ನಿಮಿಷಗಳೇ ಉರುಳಿದ್ದರೂ ಆ ಮುದಿ ಹೆಂಗಸು ಜೋರಾಗಿ ಉಸಿರಾಡುತ್ತಲೆ ಇತ್ತು. ಆಕೆ ತಡಬಡಾಯಿಸುತ್ತಲೇ ಬಯ್ಯಲು ಬಾಯ್ತೆರೆದಳು. … Read more

ಸ್ನೇಹ ಭಾಂದವ್ಯ (ಭಾಗ 1): ನಾಗರತ್ನಾ ಗೋವಿಂದನ್ನವರ

           ಶಿವಮೊಗ್ಗ ಜಿಲ್ಲೆಯಲ್ಲಿರುವ ಅಗಸವಳ್ಳಿ ಇದೊಂದು ಪ್ರಕೃತಿಯ ಮಧ್ಯ ಇರುವ ಸುಂದರವಾದ ಹಳ್ಳಿ. ಈ ಹಳ್ಳಿಯಲ್ಲಿ ಮಧ್ಯಮ ಕುಟುಂಬದಲ್ಲಿ ಜನಿಸಿರುವ ಇಬ್ಬರು ಹುಡುಗಿಯರ ಕತೆ ಇದು. ಮೊಬೈಲ್ ಬಳಕೆ ಇನ್ನು ಆರಂಭವಾಗಿರದ ಸಮಯವದು.      ಹಾಳಾದ ಕರೆಂಟು ಯಾವಾಗಂದ್ರೆ ಆವಾಗ ಕೈಕೊಟ್ಟು ಬಿಡುತ್ತದೆ ಎಂದು ಅಡುಗೆ ಮನೆಯಲ್ಲಿದ್ದ ರಾಧಮ್ಮ ಗೊಣಗುತ್ತಿದ್ದಳು. ಹಾಲಿನಲ್ಲಿ ಕುಳಿತಿದ್ದ ಶಿವಾನಂದನಿಗೆ ಇದು ಕಿರಿಕಿರಿ ಎನಿಸಿತು. ಏನೇ ನಿನ್ನದು ಬೇಗ ದೀಪಾ ಹಚ್ಚಬಾರದೇನೆ ಎಂದು ಹೆಂಡತಿಗೆ ಹೇಳಿದ. … Read more

ಕೆಂಗುಲಾಬಿ (ಭಾಗ 15): ಹನುಮಂತ ಹಾಲಿಗೇರಿ

  (ಇಲ್ಲಿಯವರೆಗೆ)   ಇಳಿಸಂಜೆಯ ಹೊತ್ತು ನಾನು ಮತ್ತು ದೀಪಾ ಮೆಜೆಸ್ಟಿಕ್ ಹತ್ತಿರಕ್ಕೆ ಬಂದಿದ್ದೆವು. ಶಾರಿ ಇಲ್ಲಾದರೂ ಸಿಗಬಹುದೆ ಎಂಬ ದೂರದ ನಿರೀಕ್ಷೆಯೊಂದಿಗೆ. ಅಲ್ಲೆಲ್ಲ ಅಸಂಖ್ಯಾತ ದಂಧೆಯ ಮಹಿಳೆಯರು. ಯಾರೋ ದೀಪಾಳ ಹೆಸರು ಹಿಡಿದು ಕೂಗಿದಂತಾಯಿತು. ಹಿಂದೆ ತಿರುಗಿ ನೋಡಿದರೆ ಬಾಯ್ತುಂಬ ನಗುತ್ತಾ ಒಬ್ಬಾಕೆ ಹತ್ತಿರ ಬಂದು ದೀಪಾಳ ಮುಂದೆ ಬಂದು ನಿಂತಳು. ದೀಪಾ ಕೂಡ ಅವಳನ್ನು ಮೀರಿಸುವಂತೆ ನಕ್ಕು ಆತ್ಮೀಯತೆಯಿಂದ ಅವಳ ಕೈ ಹಿಡಿದುಕೊಂಡಳು. ‘ಇವಳು ಮಂಜುಳಾ ಅಂತ. ನಮ್ಮ ಸಂಸ್ಥೆಯಿಂದ ಆರೋಗ್ಯ ಕುರಿತು ತರಬೇತಿ … Read more

ಕೆಂಗುಲಾಬಿ (ಭಾಗ 14): ಹನುಮಂತ ಹಾಲಿಗೇರಿ

  (ಇಲ್ಲಿಯವರೆಗೆ) ಕಾಲ ಹೀಗೆ ಬರುತ್ತೆ ಅಂತ ಹೇಳಲಿಕ್ಕಾಗುವುದಿಲ್ಲ. ಮದುವೆಯಾಗಿ ವರ್ಷ ತುಂಬಿ ಎರಡನೇ ವರ್ಷಕ್ಕೆ ಕಾಲಿಟ್ಟರಲಿಲ್ಲ. ಇನ್ನೂ ನಾನು ನನ್ನ ಹೆಂಡತಿ ಲಲಿತಾ ಪರಸ್ಪರ ಅರ್ಥ ಮಾಡಿಕೊಳ್ಳುವುದರಲ್ಲಿದ್ದೆವು. ಮದುವೆಯಾದ ತಕ್ಷಣವೇ ನಾನು ನನ್ನ ಹೆಂಡತಿಗೆ ನನ್ನ ಕೆಲಸದ ವಿಷಯ, ಶಾರಿಯ ವಿಷಯಗಳನ್ನು ಮುಕ್ತವಾಗಿ ಹೇಳಿದ್ದೆ. ಅಷ್ಟೇ ಅಲ್ಲದೆ ಅವಳನ್ನು ಶಾರಿಯ ಮನೆಗೆ ಕರೆದುಕೊಂಡು ಹೋಗಿದ್ದೆ ಕೂಡ. ಅಲ್ಲಿ ನಮ್ಮಿಬ್ಬರ ಪ್ರೀತಿ ವಿಶ್ವಾಸವನ್ನು ಗಮನಿಸಿದ ಲಲ್ಲಿ ಅಂದಿನಿಂದ ತಾನು ನನ್ನೊಂದಿಗೆ ನಡೆದುಕೊಳ್ಳುವ ಪದ್ದತಿಯನ್ನೇ ಬದಲಿಸಿದಳು. ಅವಳಲ್ಲಿ ಅನುಮಾನದ … Read more

ಕೆಂಗುಲಾಬಿ (ಭಾಗ 13): ಹನುಮಂತ ಹಾಲಿಗೇರಿ

(ಇಲ್ಲಿಯವರೆಗೆ) ಅವತ್ತು ಪೂರ್ತಿ ನಾನು ರೂಮಿನಲ್ಲಿ ಏಳಲೂ ಆಗದೆ ಮಲಗಲು ಆಗದೆ ಬಿದ್ದುಕೊಂಡಿದ್ದೆ. ಕಿವಿಯಲ್ಲಿ ಶಾರಿಯ ಮಾತುಗಳೆ ಗುಂಯ್ಗುಡುತ್ತಿದ್ದವು. ಒಂದಿಷ್ಟು ಮಂಪರು, ಒಂದಿಷ್ಟು ಅರೆ ಎಚ್ಚರ ಮತ್ತೆ ಮಂಪರು. ಶಾರಿ ಬದುಕಿನ ಗೋಳಿಗೆ ಇತಿಶ್ರೀ ಹಾಡುವುದೆಂತು ಎಂದು ಯೋಚಿಸಿದ್ದೇ ಬಂತು. ಒಮ್ಮೊಮ್ಮೆ ನೆಮ್ಮದಿಯಿಂದ ಇರುವ ನಾನು ಶಾರಿಯ ಗದ್ದಲದಲ್ಲಿ ಯಾಕೆ ಸಿಲುಕಿಕೊಳ್ಳಬೇಕು? ನಾನು ಮೊದಲಿನಂತಾಗಬೇಕಾದರೆ ಶಾರಿಯನ್ನು ಮತ್ತೆ ಭೇಟಿಯಾಗಲೇಬಾರದು ಎನಿಸಿತು. ಆದ್ರೆ ಮನಸ್ಸಿಗೆ ಒಗ್ಗಲಿಲ್ಲ. ವರದಿ ತಯಾರಿಸಿಕೊಂಡು ಬಾ ಎಂದ ರಾಜನ್ ಹೇಳಿದ್ದು ನೆನಪಾಯಿತು. ಈಗ ಆಗಿರೋದನ್ನ … Read more

ಕೆಂಗುಲಾಬಿ (ಭಾಗ 12): ಹನುಮಂತ ಹಾಲಿಗೇರಿ

  ಇಲ್ಲಿಯವರೆಗೆ   ಮರುದಿನ ನಮ್ಮನ್ನು ಹುಡುಕಿಕೊಂಡು ರತ್ನಮ್ಮನ ಪ್ರಿಯಕರನೆನಿಸಿಕೊಂಡಿದ್ದ, ರತ್ನಮ್ಮ ಇಲ್ಲದಿದ್ದಾಗ ಗಲ್ಲೆ ಮೇಲೆ ಕೂಡ್ರುತ್ತಿದ್ದ ಧರ್ಮಣ್ಣ ಪೊಲೀಸ್ ಸ್ಟೇಷನ್ನಿನೊಳಗೆ ನಾವಿರುವ ಕಡೆ ಬಂದಿದ್ದ. ಆತನನ್ನು ಅದ್ಹೇಗೋ ಪೋಲೀಸರು ಒಳಗೆ ಬಿಟ್ಟಿದ್ದರು. ಇಲ್ಲಿಂದ ಬಿಡಿಸಿಕೊಂಡು ಹೋಗಲು ಸಾವಿರಾರು ರೂಪಾಯಿ ಖರ್ಚಾಗುತ್ತವೆ. ರತ್ನಮ್ಮ ಹತ್ತು ಸಾವಿರ ಹೊಂದಿಸಿ ನಿಮ್ಮನ್ನು ಬಿಡಿಸಿಕೊಳ್ಳಾಕ ತಯಾರದಾಳ. ನೀವು ಮೇಲಿನ ಖರ್ಚುಗಳಿಗಾಗಿ ಪ್ರತಿಯೊಬ್ಬರು ಐದೈದು ನೂರು ಕೊಡಬೇಕು ಎಂದು ಕರಾರು ಮಾಡಿದ. ಆದರೆ ನಮ್ಮಲ್ಲಿ ಯಾರೊಬ್ಬರಲ್ಲಿಯೂ ಹಣವಿರಲಿಲ್ಲ. ಅದು ಅವನಿಗೂ ಗೊತ್ತಿತ್ತು. ‘ಈಗ … Read more

ಕೆಂಗುಲಾಬಿ (ಭಾಗ 11): ಹನುಮಂತ ಹಾಲಿಗೇರಿ

  ಇಲ್ಲಿಯವರೆಗೆ ಯಾರೋ ಬಾಗಿಲು ಬಡಿದಂತಾಗಿ ಅವಸರವಾಗಿ ಮೇಲೆದ್ದು, ಮಲಗಿದ್ದ ಮಗುವನ್ನು ಎತ್ತುಕೊಂಡು ಹೊರ ಬಂದೆ. ಒಂದಿಬ್ಬರು ಗಿರಾಕಿ ಬಂದಿದ್ದರು. ಈ ಸಲ ವಠಾರದ ಮುಂದಿರುವ ಗಲ್ಲೆ ಮೇಲೆ ರತ್ನಮ್ಮ ಕುಳಿತಿದ್ದಳು. ನಾನು ಮಗುವನ್ನು ಎತ್ತಿಕೊಂಡು ಬಾಗಿಲಲ್ಲಿ ನಿಂತುಕೊಂಡಿದ್ದೆ. ರತ್ನಮ್ಮ ನನ್ನನ್ನು ಕೆಕ್ಕರಿಸಿ ನೋಡುತ್ತಿದ್ದುದರಿಂದ ನನಗೆ ಮುಜುಗರವಾಗುತ್ತಿತ್ತು.    ಗಿರಾಕಿ ತಮ್ಮಿಷ್ಟದ ಹುಡುಗಿಯರನ್ನು ಆಯ್ದುಕೊಂಡು ರೂಮಿನೊಳಕ್ಕೆ ಮಾಯವಾದರು. ಅವರು ಒಳ ಹೋದ ತಕ್ಷಣ ನನ್ನಲ್ಲಿಗೆ ಬರಬರನೆ ಬಂದ ರತ್ನಮ್ಮ ನನ್ನ ರಟ್ಟೆಯನ್ನು ಹಿಡಿದುಕೊಂಡು ದರ ದರ ಎಳೆಯುತ್ತ … Read more

ಕೆಂಗುಲಾಬಿ (ಭಾಗ 10): ಹನುಮಂತ ಹಾಲಿಗೇರಿ

  ಇಲ್ಲಿಯವರೆಗೆ   ಅವತ್ತು ಹಾಗೆ ಆತ್ಮೀಯಳಾದ ಅವಳು ಸ್ವಲ್ಪ ದಿನಗಳವರೆಗೆ ಆಶ್ರಯದಾತಳು ಆದಳು. ತನ್ನ ಕಥೆಯನ್ನೆಲ್ಲ ಹೇಳಿಯಾದ ಮೇಲೆ ನನ್ನ ಕಥೆಯನ್ನು ಕೇಳಿದ ಅವಳು, ನಾನು ಕೂಡ ದಂಧÉಗೆ ಹಳಬಳೇ ಎಂಬುದನ್ನು ಅರ್ಥ ಮಾಡಿಕೊಂಡಾದ ಮೇಲೆ ‘ನಮ್ಮ ರತ್ನಮ್ಮನ ದಂಧೆಮನೆಗೆ ನೀನು ಸೈತ ಬರುವುದಾದರೆ ಬಾ' ಎಂದು ಕರೆದಳು. ಮರುಕ್ಷಣ ‘ಬೇಡ ಬೇಡ ನನ್ನ ಮಗನಿಗಾದ ದುರ್ಗತಿಯೇ ನಿನ್ನ ಮಗಳಿಗೂ ಆಗಬಹುದು, ಇಲ್ಲವೇ ನಿನ್ನ ಮಗಳನ್ನು ಸ್ವಲ್ಪ ದೊಡ್ಡವಳಾದ ತಕ್ಷಣವೆ ದಂಧೆಗೆ ಇಳಿಸಿಬಹುದು. ಈ ಕೂಪದಲ್ಲಿ … Read more

ಕೆಂಗುಲಾಬಿ (ಭಾಗ 9): ಹನುಮಂತ ಹಾಲಿಗೇರಿ

ಇಲ್ಲಿಯವರೆಗೆ ಆ ಕಡೆಯಿಂದ ಒಮ್ಮಿಂದೊಮ್ಮೆಲೆ ಗಲಾಟೆ ಶುರುವಾಯಿತು. ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಕರ್ಚೀಫ್ ಅಂಗಡಿಯವನು ಕರ್ಚೀಫ್‍ಗಳೆಲ್ಲವನ್ನು ಬಾಚಿ ಎದೆಗೊತ್ತಿ ಓಡತೊಡಗಿದ. ಬಾಚಣಿಕೆ, ಕನ್ನಡಿ, ಬ್ರಷ್, ಸೀರಣಿಗೆ ಮಾರುತ್ತಿದ್ದ ಸಲೀಮ ಹರವಿದ್ದ ಪ್ಲಾಸ್ಟಿಕ್ ಕವರನ್ನೆ ಮಡಚಿ ಬಗಲಲ್ಲಿಟ್ಟುಕೊಂಡು ಮೆಲ್ಲನೆ ಕಾಲುಕಿತ್ತ. ಅದೆಲ್ಲೆಲ್ಲಿಂದಲೋ ಹೊಂದಿಸಿದ್ದ ಸೆಕೆಂಡ್ ಹ್ಯಾಂಡ್ ಚಪ್ಪಲಿಗಳನ್ನು ರಾಶಿ ಹಾಕಿ ಹರಾಜು ಹಾಕುತ್ತಿದ್ದ ರಾಜು ಒಂದೇ ಉಸಿರಿಗೆ ಗೋಣಿ ಚೀಲಕ್ಕೆ ಎಲ್ಲಾ ಚಪ್ಪಲಿಗಳನ್ನು ತುರುಕಿ ಹೊರಲಾರದೆ ಹೊತ್ತು ಅವಸರದಿಂದ ನಡೆಯತೊಡಗಿದ. ಎಲ್ಲವೂ ಕ್ಷಣಾರ್ಧದಲ್ಲಿಯೇ ನಮ್ಮ ಕಣ್ಮಂದೆ ನಡೆಯುತ್ತಿತ್ತು. … Read more

ಕೆಂಗುಲಾಬಿ (ಭಾಗ 8): ಹನುಮಂತ ಹಾಲಿಗೇರಿ

ಹಿಂದಿನ ಸಂಚಿಕೆಯಿಂದ… ಸುಮಾರು ಮುಕ್ಕಾಲು ಗಂಟೆ ಕಳೆದಿರಬಹುದು. ಏಳೆಂಟು ವರ್ಷದ ಹುಡುಗಿ ಏದುಸಿರು ಬಿಡುತಾ ಓಡೋಡಿ ಬಂದು ನನ್ನನ್ನು ಹೌದು ಅಲ್ಲವೋ ಎಂದು ಅನುಮಾನಿಸುತಾ "ಅಂಕಲ್ ಅವ್ವ ಕರಿತಿದಾರೆ" ಎಂದಿತು. ನಾನು ಆ ಮಗುವನ್ನು ಹಿಂಬಾಲಿಸುತ್ತಾ ಮಾತಿಗಿಳಿದೆ. ’ಪುಟ್ಟಿ ನಿನ್ನ ಹೆಸರು?’ ’ರಾಜಿ’ ಎಂದಿತು ನಾಚಿಕೊಂಡು. ’ನಿಮ್ಮ ಪಪ್ಪಾ ಎಲ್ಲಿದ್ದಾರೆ ರಾಜಿ?’ ’ಗೊತ್ತಿಲ್ಲ, ನಾ ಸಣ್ಣವಳಿದ್ದಾಗ ದಿನ ಕುಡಿದು ಬಂದು ಮಮ್ಮಿನ ಹೊಡಿತಿದ್ರು. ಆಗ ಅವ್ವ ಅಳತಿದ್ಲು. ಈಗೆಲ್ಲಿದ್ದಾರೋ ಗೊತಿಲ್ಲ. ಆದರೆ ಈಗ ದಿನಾಲೂ ಮನೆಗೆ ಹೊಸ … Read more

ಕೆಂಗುಲಾಬಿ (ಭಾಗ 7): ಹನುಮಂತ ಹಾಲಿಗೇರಿ

ಹಾವೇರಿಯ ಸಂವರ್ಧನ ಎನ್‍ಜಿಓದಲ್ಲಿ ನನಗೆ ತರಬೇತಿಯಾದ ಮೇಲೆ ಹಾವೇರಿ ಮೂಲೆಯೊಂದರಲ್ಲಿರುವ ಹಳ್ಳಿಯ ಸ್ವಸಹಾಯ ಸಂಘಗಳ ಸಮುದಾಯ ಅಧಿಕಾರಿ ಎಂದು ಕಳುಹಿಸಿಕೊಟ್ಟಿದ್ದರು. ನಾನು ಹಲಗೇರಿಗೆ ಬಂದಿಳಿದಾಗ ನನ್ನನ್ನು ಆ ಸುಡು ಬಿಸಿಲಿನಲ್ಲಿ ಎದುರುಗೊಂಡವನು ತಿಪ್ಪೇಶಿ. ಅವನು ಅಲ್ಲಿ ನನಗೆ ಆ ಹಳ್ಳಿಯ ಮಾಹಿತಿ ನೀಡುವ ಫೀಲ್ಡ್ ಗೈಡ್ ಆಗಿ ಕೆಲಸ ಮಾಡತಿದ್ದ. ನಮ್ಮ ಸಂಸ್ಥೆ ಕೆಲಸ ಮಾಡುವ ಪ್ರತಿ ಹಳ್ಳಿಯಿಂದಲೂ ತಿಪ್ಪೇಶಿಯಂತಹ ಒಬ್ಬರನ್ನು ಸಂಘಗಳ ಅಧಿಕಾರಿ ಎಂದು ನೇಮಿಸಿಕೊಂಡಿರುತ್ತಿದ್ದರು. ತಿಪ್ಪೇಶಿ ಹೊರಲಾರದಂತಹ ನನ್ನ ಎರಡು ಬ್ಯಾಗುಗಳನ್ನು ಹೆಗಲಿಗೆ ನೇತು … Read more

ಕೆಂಗುಲಾಬಿ (ಭಾಗ 6): ಹನುಮಂತ ಹಾಲಿಗೇರಿ

[ಇಲ್ಲಿಯವರೆಗೆ…] ಈ ಎಲ್ಲ ವಿವರಗಳನ್ನು ಸವಿವರವಾಗಿ ಬರೆದುಕೊಂಡು ನಾನು ರಾಜನ್ ಸರ್ ಚೇಂಬರಿಗೆ ಹೋದೆ. ನನ್ನ ವರದಿ ಮೇಲೆ ಸುಮ್ಮನೆ ಒಮ್ಮೆ ಕಣ್ಣಾಡಿಸಿದ ಅವರು ನನ್ನ ಕಡೆ ಒಂದು ಮೆಚ್ಚುಗೆಯ ನೋಟ ಬೀರಿ, ’ವೆರಿ ಗುಡ್ ಮಲ್ಲೇಶಿ. ಆದ್ರೆ, ನೀನು ಈ ದಂದೆಯ ಬಗ್ಗೆ ಇನ್ನಷ್ಟು ತಿಳಕೊಬೇಕಾದರೆ ಒಂದಿಷ್ಟು ದಂದೆಯಲ್ಲಿದ್ದ ಮಹಿಳೆಯರನ್ನು ಮಾತಾಡಿಸಬೇಕಿತ್ತು’ ಎಂದು ನನ್ನ ಕಣ್ಣುಗಳನ್ನು ಕೆಣಕಿದರು. ’ನಾನು ಮಾತಾಡಿಸಬೇಕೆಂದೇ ಆ ನಡು ವಯಸ್ಸಿನವಳ ಹಿಂದ್ಹಿಂದೆ ಹೋಗಿ ಆಟೊ ಹತ್ತಿದ್ದು ಸರ್. ಆದ್ರೆ, ನ್ನನ್ನು ಅವರು … Read more

ಕೆಂಗುಲಾಬಿ (ಭಾಗ 5): ಹನುಮಂತ ಹಾಲಿಗೇರಿ

ಹುಬ್ಬಳ್ಳಿಯೊಳಗ ಮಂಡೇ ಬಜಾರಕ ದೊಡ್ಡ ಹೆಸರು. ಅವತ್ತು ಸೋಮವಾರವಾದ್ದರಿಂದ ಮಂಡೇ ಬಜಾರ್‌ನತ್ತ ಹೆಜ್ಜೆ ಬೆಳೆಸಿದೆ. ಇಲ್ಲಿ ೧೦ ರೂ.ಗಳಿಗೆ ಏನಿಲ್ಲ, ಏನುಂಟು. ಒಂದೊಳ್ಳೆಯ ಅಂಗಿ, ಹವಾಯಿ ಚಪ್ಪಲಿ, ಲುಂಗಿ, ಟವೆಲ್ಲು, ಒಳ ಉಡುಪು, ಬಾಂಡೆ ಸಾಮಾನುಗಳು ಏನೆಲ್ಲವನ್ನು ಖರೀದಿಸಬಹುದು. ಆದರೆ ಇವೆಲ್ಲ ಸೆಕೆಂಡ್ ಹ್ಯಾಂಡ್‌ಗಳು, ನಿಜವಾಗಿ ಹೇಳಬೇಕೆಂದರೆ ಜಾತ್ಯತೀತತೆ ಆಚರಣೆಗೆ ಮಂಡೆ ಬಜಾರ್ ಒಂದು ಸಂಕೇತವಿದ್ದಂತೆ. ಇಲ್ಲಿನ ಒಳ ಉಡುಪುಗಳನ್ನು ಮೊದಲ್ಯಾರೋ ಧರಿಸಿರತಾರೆ. ಈಗ ಅದು ಮತ್ಯಾರ ಮೈಗೋ ಅದು ಅಂಟಿಕೊಂಡು ಅವರ ಬೆವರು ವಾಸನೆಗೆ ಹೊಂದಿಕೊಳ್ಳುತ್ತದೆ. … Read more

ಕೆಂಗುಲಾಬಿ (ಭಾಗ 4): ಹನುಮಂತ ಹಾಲಿಗೇರಿ

(ಹಿಂದಿನ ಭಾಗ ಇಲ್ಲಿದೆ) ಅವತ್ತು ಉಜ್ಜಳಪ್ಪನ ಜಾತ್ರಿ ಈ ಮೊದಲಿನಂಗ ಅದ್ದೂರಿಯಾಗಿಯ ನಡೆದಿತ್ತು. ಸುತ್ತು ಊರು ಕೇರಿಯವರೆಲ್ಲ ಸೇರಿದ್ದರು. ದೇವರಿಗೆ ಬಿಡುವ ಹುಡುಗಿರನ್ನು ಉಜ್ಜಳಪ್ಪನ ಮುತ್ಯಾನ ಗುಡಿಯೊಳಗ ಇರೋ ಅಂತಪುರಕ್ಕೆ ಹೋಗಿ ಅಲ್ಲಿ ಹುಡುಗಿಯರ ಗುಪ್ತಾಂಗವನ್ನು ಗಾಯಗೊಳಿಸುವ ಪದ್ದತಿ ಇತ್ತೀಚಿನ ಕೆಲವು ವರ್ಷಗಳಲ್ಲಿ ಕೆಲವು ಪ್ರತಿಭಟನಾಕಾರರ ಪ್ರಯತ್ನದಿಂದಾಗಿ ನಿಂತಿತ್ತಾದರೂ ಹುಡುಗಿಯರನ್ನು ದೇವರಿಗೆ ಬಿಡೋದು ಮತ್ತು ಪ್ರಾಣಿಗಳನ್ನು ಬಲಿ ಕೊಡೋದು ಇನ್ನು ಮುಂದುವರೆದಿತ್ತು. ಅಂದು ಉಜ್ಜಳಪ್ಪನ ಅಣ್ಣ ತಮ್ಮಂದಿರು ಸಂಬಂಧಿಕ ದೇವರುಗಳನ್ನು ಸುತ್ತಲಿನ ಹಳ್ಳಿಯ ಭಕ್ತರು ಪಲ್ಲಕ್ಕಿಗಳಲ್ಲಿ ಹೊತ್ತು ತಂದಿದ್ದರು. … Read more

ಕೆಂಗುಲಾಬಿ (ಭಾಗ 3): ಹನುಮಂತ ಹಾಲಿಗೇರಿ

(ಹಿಂದಿನ ಭಾಗ ಇಲ್ಲಿದೆ) ಶಾಲೆಯಲ್ಲಿ ಇರುವಷ್ಟು ಹೊತ್ತು ಅಕ್ಕನ ಧ್ಯಾನದಲ್ಲಿರುತಿದ್ದ ನಾನು ಶಾಲೆ ಬಿಟ್ಟೊಡನೆ ಅಕ್ಕನೊಂದಿಗೆ ಆಟದಲ್ಲಿ ಸೇರಿಕೊಂಡು ಬಿಡುತಿದ್ದೆ. ಆಗ ಅದೆಷ್ಟೊಂದು ಬಗೆಯ ಆಟಗಳು ಆಡುತ್ತಿದ್ದೆವು. ನಮ್ಮ ಕೇರಿಯಲ್ಲಿ ನನ್ನ ವಾರಿಗೆಯ ಹುಡುಗರಿಗೆಲ್ಲ ನನ್ನಕ್ಕಳೆ ಲೀಡರು. ಅಂಡ್ಯಾಳು, ಮಣಿಪತ್ತು, ಚಕ್ಕಾದೋನಿ, ಹುಲಿಮನಿಯಾಟ, ಲಗೋರಿ, ಕುಂಟಲಿಪ್ಪಿ ಹಿಂಗ ರಗಡ ಆಡ್ತಿದ್ದಿವಿ. ಒಮ್ಮೊಮ್ಮೆ ಗಂಡ ಹೆಂಡತಿ ಆಟದೊಳಗ ಅಕ್ಕ ನಾನು ಗಂಡ ಹೆಂಡತಿಯಾಗಿದ್ದು ನೆನಸ್ಕೊಂಡ್ರ ಈಗಲೂ ನಗು ಬರತೈತಿ. ಹಿಂಗ ಒಂದು ದಿನ ಅಕ್ಕನ ಕೂಡ ಆಟ ಆಡಬೇಕೂಂತ … Read more

ಕೆಂಗುಲಾಬಿ (ಭಾಗ 2): ಹನುಮಂತ ಹಾಲಿಗೇರಿ

ನನ್ನ ಈ ನೌಕರೀ ಬಗ್ಗೆ ಹೇಳೋ ಮುನ್ನ ನನ್ನನ್ನು ಬಾಳಷ್ಟು ಕಾಡಿಸಿ ಪೀಡಿಸಿ ಬದಲಾವಣೆಗೆ ಕಾರಣಾದ ನನ್ನ ಕುಟುಂಬದ ಹಿನ್ನೆಲೆಯ ಬಗ್ಗೆ ಸ್ವಲ್ಪ ಮೊದಲಾ ಹೇಳಿದರೆ ಒಳ್ಳೇದು. ಬಾಗಲಕೋಟಿಯ ಭೀಮನಕೊಪ್ಪ ಅನ್ನೋ ಕುಗ್ರಾಮದ ಮ್ಯಾಲ ಯಾರಾದರೂ ವಿಮಾನದಾಗ ಬಂದ್ರ, ಆ ಊರಿನ ಅಂಚಿನಲ್ಲಿ ನನ್ನ ದಲಿತ ಕೇರಿಯ ಗುಡಿಸಲಗೊಳು ಒತ್ತೊತ್ತಾಗಿ ಚಲ್ಲಿಕೊಂಡಿರುವುದು ಕಾಣಿಸತೈತಿ. ಆ ಗುಡಿಸಲುಗಳ ನಡುವು ಒಂದು ಮಂಗಳೂರು ಹೆಂಚಿನ ಅರಮನೆಯಂಥ ಮನಿ ಎದ್ದು ಕಾಣುತೈತಿ. ಅದು ನನ್ನವ್ವ ತಾರವ್ವ ಜೋಗತಿಯ ಮನಿ. ಅಂದ್ರ ಅದು … Read more

ಕೆಂಗುಲಾಬಿ (ಭಾಗ 1): ಹನುಮಂತ ಹಾಲಿಗೇರಿ

ಒಬ್ಬೊಬ್ಬರ ಬದುಕು ಒಂದೊಂಥರಾ. ಒಂದರೊಳಗ ಸಿಕ್ಕ ಹಾಕ್ಕೊಂಡವರು ಅದರಿಂದ ಬಿಡಿಸಿಕೊಳ್ಳಾಕ ಅವರ ಹಿಂದಿನ ಬದುಕಿನ ಅಧ್ಯಾಯಗಳು ಅಷ್ಟು ಸರಳ ಬಿಡುದಿಲ್ಲ. ಸುತ್ತಲಿನ ಪ್ರಪಂಚವನ್ನು ಕಣ್ಣರಳಿಸಿ ನೋಡುವ ಮುನ್ನವೇ, ಯಾರದೋ ಹುನ್ನಾರಕ್ಕೆ ಬಲಿಯಾಗಿ, ತಾವು ಮಾಡದ ತಪ್ಪಿಗಾಗಿ, ಎಷ್ಟೋ ಹೆಣ್ಮಕ್ಕಳು ಇಂದು ತಮ್ಮ ಮೈಯನ್ನೇ ಸಂತೆಯೊಳಗ ಬಿಕರಿಗಿಟ್ಟು ತುತ್ತಿನ ಚೀಲ ತುಂಬಿಸಿಕೊಳ್ಳಾಕ ಹತ್ಯಾರ. ಅಂಥ ಮೈ ಮಾರೊಳ ಹೊಟ್ಟಿಯೊಳಗಿಂದ ಭೂಮಿಗೆ ಇಳಿದು ಬಂದವ ನಾ. ಹಿಂದೆ, ಇಂದು, ಮುಂದೆಂದೂ ಈ ಬ್ಯಾನಿ ನನ್ನನ್ನು ಬಿಟ್ಟು ಬಿಡದ ಕಾಡಕೋತನ ಇರತೈತಿ. … Read more